ಬಿಜೆಪಿ ಮುಖಂಡ ಬಿ.ಡಿ.ಭೂಕಾಂತ್ಗೆ ರಾಜ್ಯ ಸಚಿವ ಸ್ಥಾನಮಾನದ ಹುದ್ದೆ ನೀಡಿಕೆ !: ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ

ಬಿಜೆಪಿ ಮುಖಂಡನಿಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ. ಶಿಕಾರಿಪುರದ ಬಿಜೆಪಿ ಮುಖಂಡ ಬಿ.ಡಿ.ಭೂಕಾಂತ್ಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ.
ಫೆಬ್ರವರಿ 7ನೇ ತಾರೀಖು 54 ನಿಗಮ-ಮಂಡಳಿ ಅಧ್ಯಕ್ಷರ ನೇಮಕವನ್ನು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಲ್ಲಿ ಬಿಜೆಪಿ ಮುಖಂಡ ಬಿ.ಡಿ.ಭೂಕಾಂತ್ಗೆ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಜೊತೆಗೆ ರಾಜ್ಯ ಸಚಿವ ಸ್ಥಾನಮಾನವನ್ನು ಸಹ ನೀಡಲಾಗಿದೆ. ಇದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಆಂತರಿಕ ಅಸಮಾಧಾನ ಸೃಷ್ಟಿಯಾಗಿದೆ.
ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಿದ್ದು ಏಕೆ ಎಂದು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಭೂಕಾಂತ್ ಅವರ ಪತ್ನಿ ಕೂಡ ಬಿಜೆಪಿಯಿಂದ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದರು. ರಾಜ್ಯ ಸರ್ಕಾರದ ಆದೇಶವೇ ಈಗ ಸ್ವಪಕ್ಷ ಕಾಂಗ್ರೆಸ್ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಶಾಸಕರಿಗೆ ಪ್ರಮುಖ ನಿಗಮ ಮಂಡಳಿ ಸ್ಥಾನಮಾನ ಅನ್ವಯವಾಗುವಂತೆ ಸರ್ಕಾರ ಆದೇಶ ಮಾಡಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಶಿಷ್ಟಾಚಾರ ವಿಭಾಗದಿಂದ ಆದೇಶ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
What's Your Reaction?
Like
0
Dislike
0
Love
0
Funny
0
Angry
0
Sad
0
Wow
0